Thursday, June 18, 2009

ಆಕಳು ಮೂತ್ರ ಬೆಳೆಗಳಿಗೆ ಮೂಲಮಂತ್ರ

ಭಾರತೀಯ ರೈತರಿಗೆ ಮತ್ತು ಜಾನುವಾರುಗಳಿಗೆ ಬಿಡದ ನಂಟು. ಭೂಮಿಯನ್ನು ಬಿತ್ತುವುದರಿಂದ ಹಿಡಿದು ಫಸಲು ಪಡೆಯುವತನಕ ರೈತ ಜಾನುವಾರುಗಳನ್ನೇ ಅವಲಂಬಿಸಿರುತ್ತಾನೆ. ಅದರಲ್ಲೂ ಆಕಳು ರೈತನಿಗೆ ದೇವರ ಸಮಾನವಿದ್ದಂತೆ. ಆಕಳು ಮೂತ್ರವನ್ನು ಬೆಳೆಗಳಿಗೆ ಗೊಬ್ಬರವನ್ನಾಗಿ ಉಪಯೋಗಿಸುತ್ತಾರೆ. ಆಕಳು ಮೂತ್ರ (ಶಗಣಿ) ಬೆಳೆಗಳಿಗೆ ಮೂಲ ಮಂತ್ರವಿದ್ದಂತೆ.


ಯಾವ ರಾಸಾಯನಿಕ ಗೊಬ್ಬರಗಳು ಮಾಡದಂತ ಕೆಲಸವನ್ನು ಆಕಳು ಮೂತ್ರ ಮಾಡುತ್ತದೆ. ಬೆಳೆಗಳಿಗೆ ನೀರು ಕೊಡುವ ಸಮಯದಲ್ಲಿ ನೀರಿನ ಜೊತೆ ಆಕಳು ಶಗಣಿಯನ್ನು ಮಿಶ್ರಣ ಮಾಡಲಾಗುತ್ತದೆ. ಇದು ಪ್ರತಿ ಬೆಳೆಯನ್ನು ತಲುಪುತ್ತದೆ. ಬೆಳೆ ಪುಷ್ಟಿದಾಯಕವಾಗಲು ಈ ಪದ್ಧತಿ ಸಹಕಾರಿಯಾಗುತ್ತದೆ.

ವಿಧಾನ -

ಹೊಲಕ್ಕೆ ನೀರು ಬರುವ ಮೂಲ ಅಂದರೆ, ಕಾಲುವೆ ಅಥವಾ ಕೊಳವೆ ಹೀಗೆ ನೀರು ಬರುವ ಜಾಗದಲ್ಲಿ ಒಂದು ಸಣ್ಣ ಗುಂಡಿಯನ್ನು ತೋಡಿ . ಆ ಗುಂಡಿಯಲ್ಲಿ ಆಕಳು ಮೂತ್ರವನ್ನು ಶೇಕರಿಸಬೇಕು , ನಂತರ ಕೊಳವೆಯ ಮುಖಾಂತರ ನೀರು ಬಂದಾಗ ಕಟ್ಟಿಗೆಯ ಸಹಾಯದಿಂದಲೋ ಅಥವಾ ಕೈ ಮುಖಾಂತರ ಆ ಆಕಳು ಮೂತ್ರವನ್ನು ಕಲಿಸಬೇಕು. ಹಾಗೆ ಮಾಡುವಾಗ ನೀರಿನಲ್ಲಿ ಮೂತ್ರ ಮಿಶ್ರಣವಾಗಿ ಪ್ರತಿ ಬೆಳೆಯ ಬೇರುಗಳಿಗೆ ನೇರವಾಗಿ ತಲುಪುತ್ತದೆ. ಇದರಿಂದ ಫಸಲು ಚೆನ್ನಾಗಿ ಬರುತ್ತದೆ. ಮತ್ತು ಭೂಮಿಯು ಫಲವತ್ತತೆಯನ್ನು ಕಾಯ್ದುಕೊಳ್ಳುತ್ತದೆ.






No comments:

Post a Comment